‘ಉಗ್ರರು’ ದೇಶ ಭಕ್ತರಾಗುತ್ತಿದ್ದಾರೆ? ಸಿದ್ದರಾಮಯ್ಯ ಕಿಡಿ

‘ಉಗ್ರರು’ ದೇಶ ಭಕ್ತರಾಗುತ್ತಿದ್ದಾರೆ? ಸಿದ್ದರಾಮಯ್ಯ ಕಿಡಿ

ಬೆಳಗಾವಿ, ಮೇ. 18, ನ್ಯೂಸ್ ಎಕ್ಸ್ ಪ್ರೆಸ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಕೊಂದ ಉಗ್ರಗಾಮಿಗಳು, ಇಂದು ದೇಶ ಭಕ್ತರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟ ಮಹಾತ್ಮ ಗಾಂಧಿಯನ್ನು ಟೀಕಿಸುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಇವತ್ತು ಸಂಸದರಾಗಿರುವುದಕ್ಕೆ ಮಹಾತ್ಮ ಗಾಂಧಿಯೇ ಕಾರಣ. ದೇಶಕ್ಕೆ ಸ್ವಾತಂತ್ರ ಸಿಗದಿದ್ದರೆ, ಇವರು ಸಂಸದರಾಗಿ ಆಯ್ಕೆಯಾಗುತ್ತಿದ್ದರೇ ಎಂದು ಪ್ರಶ್ನಿಸಿದರು. ಇವರನ್ನೆಲ್ಲ ದೇಶ ಭಕ್ತರು ಎನ್ನಲು ಸಾಧ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos