ಮಹದೇವಪುರ, ಸೆ. 15: ಐಟಿಬಿಟಿ ಕ್ಷೇತ್ರವಾದ ಮಹದೇವಪುರ ಕ್ಷೇತ್ರವನ್ನು ಹಸಿರು ಮಯ ಮಾಡಲು ಶಾಸಕ ಅರವಿಂದ ಲಿಂಬಾವಳಿ ಕೈ ಬಲ ಪಡಿಸುವಂತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರು ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿ ವಾರ್ಡ್ ನಲ್ಲಿ ಗಿಡನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಯುವಕರಲ್ಲಿ ಗಿಡ ನೆಡುವ ಮತ್ತು ಪೊಷಿಸುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆಯನ್ನು ನೀಡುವ ಮೂಲಕ ಪರಿಸರದ ಜಾಗೃತಿ ಮೂಡಿಸಲು ತಿಳಿಸಿದರು.
ಗಿಡಮರಗಳನ್ನು ಸ್ವಂತ ಮಕ್ಕಳಂತೆ ಬೆಳೆಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ಪರಿಸರ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಕ್ಷೇತ್ರ ವನ್ನು ಹಸಿರು ಮಯ ಮಾಡಿಸಲು ಸಾರ್ವಜನಿಕರು ಕೈ ಜೋಡಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಶ್ವೇತಾ ಹೂಡಿ ವಿಜಯ್ ಕುಮಾರ್, ಕ್ಷೇತ್ರದ ಬಿಜೆಪಿ ಅದ್ಯಕ್ಷ ರಾಜಾರೆಡ್ಡಿ, ಮಾಜಿ ಅಧ್ಯಕ್ಷ ಜಯಚಂದ್ರರೆಡ್ಡಿ, ವಾಡ್೯ ಅಧ್ಯಕ್ಷ ನಾಗಭೂಷಣ್ ರೆಡ್ಡಿ, ಮುಖಂಡರಾದ ಹೂಡಿ ವಿಜಯ್ ಕುಮಾರ್ ಹಾಜರಿದ್ದರು.