ಬೆಂಗಳೂರು, ನ, 27 : ಬ್ರಹ್ಮಚಾರಿಯಲ್ಲಿ ಅವರದ್ದು ಅದೆಲ್ಲಕ್ಕಿಂತಲೂ ಮಜವಾದ ಪಾತ್ರವೆಂಬುದು ಈ ಹಿಂದೆ ಟ್ರೇಲರ್ನೊಂದಿಗೇ ಸಾಬೀತಾಗಿದೆ. ಅದಿತಿ ಪ್ರಭುದೇವ ಪಾತ್ರವೂ ಕೂಡಾ ಪ್ರೇಕ್ಷಕರೆಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪ್ರತಿ ಪ್ರೇಕ್ಷಕರೂ ಕೂಡಾ ಇಂಥಾ ಹಾಸ್ಯ ಪ್ರಧಾನ ಚಿತ್ರಗಳನ್ನು ಕಣ್ತುಂಬಿಕೊಂಡು ಮನಸಾರೆ ನಕ್ಕು ಹಗುರಾಗಲು ಕಾದು ಕೂತಿರುತ್ತಾರೆ.
ನೀನಾಸಂ ಸತೀಶ್ ಆರಂಭದಿಂದಲೂ ಮಂಡ್ಯ ಶೈಲಿಯ ಭಾಷಾ ಸೊಗಡಿನಿಂದ ನಗಿಸುತ್ತಾ ಬಂದವರು. ಇದರೊಂದಿಗೆ ವಿಶಿಷ್ಟ ನಟನಾಗಿ ನೆಲೆ ಕಂಡುಕೊಂಡಿದ್ದ ಅವರು ಆ ನಂತರದಲ್ಲಿ ನಾಯಕನಾಗಿಯೂ ಥರ ಥರದ ಪಾತ್ರಗಳನ್ನು ನಿರ್ವಹಿಸಿದ್ದಾರೆ.