ಹುಬ್ಬಳ್ಳಿ,ನ. 29 : ರಾಜ್ಯದ 6023 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ವಿದ್ಯುತ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಂತ ಹಂತವಾಗಿ ಯೋಜನೆ ಜಾರಿಗೊಳಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದ ಪಿಡಿಓಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಜನರೊಂದಿಗೆ ಬೆರೆತು ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕೆಂದು ಸಚಿವರು ತಾಕೀತು ಮಾಡಿದರು.
ಬಯಲು ಶೌಚ ಮುಕ್ತ :
ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಿರುವುದು ಸರಿಯಲ್ಲ. ಇದೊಂದು ಸುಳ್ಳು ಘೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳ ನಿರ್ವಹಣೆಗೂ ಹೆಚ್ಚು ಒತ್ತು ನೀಡಲು ತಿರ್ಮಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 20 ಲಕ್ಷ ರೂ ಬಿಡುಗಡೆ ಮಾಡಲಾಗುವುದು.