ಬಾಂಬ್ ಸ್ಫೋಟದಲ್ಲಿ ಹತರಾದ ಸ್ನೇಹಿತರಿಗೆ ಸಂತಾಪ ಸೂಚಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಬಾಂಬ್ ಸ್ಫೋಟದಲ್ಲಿ ಹತರಾದ ಸ್ನೇಹಿತರಿಗೆ ಸಂತಾಪ ಸೂಚಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸುಮಾರು 290ಕ್ಕೂ ಅಧಿಕ ಜನ ಮರಣ ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಕರ್ನಾಟಕದ ಕೆಲವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ನಟ ಗಣೇಶ್ ಸಹ ಬಾಂಬ್ ಸ್ಫೋಟದಲ್ಲಿ ತಮ್ಮ ಪ್ರೀತಿಯ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದಾರೆ. ಪುಟ್ಟರಾಜು ಮತ್ತು ಮರೀಗೌಡ ಮೃತ ಪಟ್ಟ ಗಣೇಶ್ ಗೆಳೆಯರಾಗಿದ್ದಾರೆ. ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ ‘ದಿ ವಿಲನ್’ ನಿರ್ಮಾಪಕ ”ನೀವು ಇನ್ನಿಲ್ಲ ಎನ್ನುವ ಸುದ್ದಿ ನಂಬಲು ಆಗುತ್ತಿಲ್ಲ. ನನಗೆ ಆಗುತ್ತಿರುವ ದುಃಖವನ್ನು ಹೇಳಲು ಪದಗಳಿಲ್ಲ. ನನ್ನ ಪ್ರೀತಿಯ ಸ್ನೇಹಿತರಾದ ಪುಟ್ಟರಾಜು ಮತ್ತು ಮರೀಗೌಡ ಇಬ್ಬರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ.” ಎಂದು ಉಗ್ರರ ದಾಳಿಯಲ್ಲಿ ಹತರಾದ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos