ಬೆಂಗಳೂರು: ಸ್ಯಾಂಡಲ್ ವುಡ್ ಟಾಪ್ ನಟರಲ್ಲಿ ಗಣೇಶ್ ಒಬ್ಬರು. ಅಭಿಮಾನಿಗಳು ಪ್ರೀತಿಯಿಂದ ಗಣಿ ಎಂದು ಕರೆಯುತ್ತಾರೆ. ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಸಿನಿಮಾಗಳೆಂದರೆ ಫ್ಯಾಮಿಲಿ ಪ್ರೇಕ್ಷಕರಿಗೆ ತುಂಬ ಇಷ್ಟ. ಆ ರೀತಿಯ ಕಥೆಗಳನ್ನೇ ಆಯ್ಕೆ ಮಾಡಿಕೊಂಡು ಗಣೇಶ್ ಸಿನಿಮಾ ಮಾಡುತ್ತಾರೆ. ಆ ಕಾರಣದಿಂದ ಅವರ ಪ್ರತಿ ಸಿನಿಮಾ ಮೇಲೂ ಫ್ಯಾಮಿಲಿ ಪ್ರೇಕ್ಷಕರು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈಗ ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಜೋಡಿಯಾಗಿ ಮಾಳವಿಕಾ ನಾಯರ್ ಅಭಿನಯಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ಡೈರೆಕ್ಟರ್ ಶ್ರೀನಿವಾಸ್ ರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಾಕಷ್ಟು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸದ್ಯಕ್ಕೆ ಈ ಸಿನಿಮಾಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಆ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾದಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ.
ಸದ್ಯಕ್ಕೆ ಶೂಟಿಂಗ್ ಮುಗಿಸಿಕೊಂಡಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ಸಿನಿಮಾದ ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯ ಹಂತವನ್ನು ತಲುಪಿದೆ. ಶೀಘ್ರದಲ್ಲೇ ಈ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಅಪ್ಡೇಟ್ ಸಿಗಲಿದೆ.