ಮೈಸೂರು, ಸೆ. 16: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆಯಾದ ಬೆನ್ನಲ್ಲೇ ಇದೀಗ ಮತ್ತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ಮುಖಂಡ, ಹೆಚ್.ಡಿ. ದೇವೇಗೌಡರ ಸಂಬಂಧಿ ಪ್ರೊ ರಂಗಪ್ಪ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಲ್ಲಿ ರಂಗಪ್ಪ ಅವರು ಸೋತಿದ್ದರು. ಇದೀಗ ಈ ಕ್ಷೇತ್ರದ ಮೇಲೆ ಸಾ.ರಾ. ಮಹೇಶ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದ್ದು, ರಂಗಪ್ಪ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಸ್. ರಂಗಪ್ಪ, ಚಾಮರಾಜ ಕ್ಷೇತ್ರದಲ್ಲಿ ನಾನು ಸೋತು ಬಳಿಕ ಜೆಡಿಎಸ್ ಪಕ್ಷದ ಯಾರೋಬ್ಬರೂ ನನ್ನನ್ನು ಮಾತನಾಡಿಸಿಲ್ಲ. ಹೀಗಾಗಿ ನಾನು ಜೆಡಿಎಸ್ ಚಟುವಟಿಕೆಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷದ ವಿರುದ್ಧ ರೆಬಲ್ ಆಗಿದ್ದಾರೆ.