ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ 45ನೇ ವಯಸ್ಸಿನಲ್ಲಿ ಮತ್ತೆ ಕಾಲೇಜು ಸ್ಟೂಡೆಂಟ್ ಆಗಿ ಮೆಟ್ಟಿಲು ಹತ್ತಿದ್ದಾರೆ. ಅವರನ್ನು ಕಾಲೇಜು ಮೆಟ್ಟಿಲು ಹತ್ತಿಸಿರೋದು ನಿರ್ದೇಶಕ ಸಂತೋಷ್ ಆನಂದರಾಮ್.
ಎಲ್ಲವೂ ಅಂದುಕೊಂಡಂತೆ ನಡೆದಿದ್ರೆ ಇಷ್ಟರಲ್ಲಾಗಲೇ ಯುವರತ್ನನ ಫಸ್ಟ್ ಕಾಪಿ ರೆಡಿಯಾಗಬೇಕಿತ್ತು. ಆದರೆ ಲಾಕ್ಡೌನ್ ಹಿನ್ನೆಲೆಯಲ್ಲಿ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇನ್ನೂ ಬಾಕಿ ಇದೆ. ಹಿಂದೆ ಈ ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸಲು ಚಿತ್ರತಂಡ ಪ್ಲ್ಯಾನ್ ರೂಪಿಸಿತ್ತು.
ಆದರೆ ಇದೀಗ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಭಾರತದ ಸುಂದರ ಹಾಡುಗಳನ್ನು ಚಿತ್ರೀಕರಿಸಲು ನಿರ್ದೇಶಕ ಆನಂದ್ ರಾಮ್ ಯೋಜನೆ ರೂಪಿಸಿದ್ದಾರೆ. ಅದರಂತೆ ಲಾಕ್ಡೌನ್ ತೆರವಾದ ಬೆನ್ನಲ್ಲೇ ಯುವರತ್ನ ಅ್ಯಂಡ್ ಟೀಮ್ ಚಿತ್ರೀಕರಣ ಪ್ರಾರಂಭಿಸಲಿದೆ.
ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸಿನಿಮಾವನ್ನು ಅಪ್ಪು ಅಭಿಮಾನಿಗಳ ಮುಂದಿಡಲು ಭರ್ಜರಿ ಪ್ಲ್ಯಾನ್ ರೂಪಿಸಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಹೀಗಾಗಿ ಚಿತ್ರದ ಬಿಡುಗಡೆ ಲಾಕ್ಡೌನ್ ಅನ್ನು ಅವಲಂಭಿಸಿರುವು ಸ್ಪಷ್ಟ.