ಬೆಂಗಳೂರು, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: ಬರಗಾಲದಿಂದ ಸಾಲಬಾಧೆ, ಬರ ಪರಿಸ್ಥಿತಿ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳ 2019 -20 ನೇ ಸಾಲಿನ ಶಿಕ್ಷಣಕ್ಕೆ ನೆರವಾಗಲು ಮುಂದಾಗಿರುವ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅನುದಾನವನ್ನು ಬಿಡುಗಡೆ ಮಾಡಿದೆ.
ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಗತ್ಯವಿರುವ ಶಿಕ್ಷಣ ಶುಲ್ಕ ಮತ್ತು ವಸತಿ ವೆಚ್ಚದ ವಿವರಗಳನ್ನು ಜಿಲ್ಲಾ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.