ಬೆಂಗಳೂರು, ಮೇ.9,ನ್ಯೂಸ್ ಎಕ್ಸ್ ಪ್ರೆಸ್: ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೂ ಲೋಕಸಭಾ ಚುನಾವಣೆಯಯಲ್ಲಿ ಭೋಪಾಲ್ ನಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕೆ ಇಳಿದಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಗೂ ಯಾವುದೇ ಸಂಬಂಧವಿಲ್ಲ ಎಂದು ವಿಶೇಷ ತನಿಖಾ ದಳ ಸ್ಪಷ್ಟನೆ ನೀಡಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಪ್ರಗ್ಯಾ ಕೈವಾಡವಿದೆ ಎಂಬುವುದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದಿದೆ. ಇದಕ್ಕೆ ಪೂರಕವಾಗುವ ಯಾವುದೇ ಅಂಶವೂ ನಮ್ಮ ಬಳಿ ಇಲ್ಲ. ಕೋರ್ಟ್ಗೆ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲೂ ಈ ಅಂಶ ಉಲ್ಲೇಖವಿಲ್ಲ,” ಎಂದು ಎಸ್ಐಟಿ ಹೇಳಿದೆ. ಸೆಪ್ಟೆಂಬರ್ 5, 2017ರಂದು ಗೌರಿ ಲಂಕೇಶ್ ಅವರನ್ನು ಮನೆಯ ಎದುರೇ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.