ಸರ್ಕಾರ ಉಳಿಸಲು ಸಿಎಂ ದೇವರ ಮೊರೆ

ಸರ್ಕಾರ ಉಳಿಸಲು ಸಿಎಂ ದೇವರ ಮೊರೆ

ಬೆಂಗಳೂರು, ಜು, 17 : ಅತೃಪ್ತರ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಸಮ್ಮಿಶ್ರ ಸರಕಾರ ಉಳಿಸಲು ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಶಂಕರ ಮಠಕ್ಕೆ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ ನೀಡಿದರು.

ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶಂಕರ ಮಠದಲ್ಲಿರುವ ಶೃಂಗೇರಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ ಸಿಎಂ, ಕುಟುಂಬ ಸಮೇತ ಪೂಜೆ, ಹೋಮ ನಡೆಸಿದ್ದಾರೆ.

ಹೋಮದಲ್ಲಿ ಎಚ್.ಡಿ.ರೇವಣ್ಣ ಹಾಗೂ ಸಿಎಂ ಕುಮಾರಸ್ವಾಮಿ ಭಾಗಿಯಾಗಿದ್ದರು. ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಶೃಂಗೇರಿ ಶಾರದಾ ದೇವಿ ದರ್ಶನ ಪಡೆದ ಸಿಎಂ ಕುಟುಂಬ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos