ಹುಬ್ಬಳ್ಳಿ, ಅ. 23 : ನೆರೆ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಲಿದೆ ಎಂದು ಸಚಿವ ಜಗದೀಶ್ ಶಟ್ಟರ್ ಹೇಳಿದರು.
ನವಲಗುಂದ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಮಾತನಾಡಿದ ಅವರು, ಕಿರೆಸೂರು, ಹೆಬಸೂರು, ಮೊರಬ, ಕಣ್ಣೂರು, ಯಮನೂರು,ಬೆಣ್ಣಿಹಳ್ಳ, ತುಪ್ಪರಿ ಹಳ್ಳ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ 24 ಸಾವಿರ ಪರಿಹಾರ ನೀಡಲು ಸರಕಾರ ನಿರ್ಧಾರಿಸಿದೆ. ಕೇಂದ್ರದ ಪರಿಹಾರ ಜೊತೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡಲಿದೆ ಎಂದರು.