ಅಮೀತ್ ಶಾ ಕಾರ್ಯಕ್ರಮಕ್ಕೆ ಹೆಚ್ಚಿನ ಬಿಗಿ ಭದ್ರತೆ

ಅಮೀತ್ ಶಾ ಕಾರ್ಯಕ್ರಮಕ್ಕೆ ಹೆಚ್ಚಿನ ಬಿಗಿ ಭದ್ರತೆ

ಹುಬ್ಬಳ್ಳಿ, ಜ. 17: ಪೌರತ್ವ ತಿದ್ದುಪಡಿ ಕಾಯ್ದೆಯ ಜಾಗೃತಿ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮೀತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದು ಬಸ್ತ್ ಹಾಗೂ ಎಲ್ಲಾ ಕಡೆಯಲ್ಲಿ ಸಿಸಿಕ್ಯಾಮರಾ ಮತ್ತು ಡ್ರೋನ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಹುಧಾ ಪೋಲಿಸ್ ಆಯುಕ್ತ ಆರ್ ದಿಲೀಪ್ ಹೇಳಿದರು.

ಇಲ್ಲಿನ ನೆಹರೂ ಮೈದಾನದಲ್ಲಿ ಸಿಎಎ ಜಾಗೃತಿ ಸಮಾವೇಶದಲ್ಲಿ ಕೇಂದ್ರಗೃಹ ಸಚಿವ ಅಮಿತ್ ಶಾ ಭಾಗಿ ಪ್ರಯುಕ್ತ ಪೊಲೀಸ್ ಆಯುಕ್ತರಿಂದ ಸ್ಥಳ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ನಾಳಿನ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ನೀಡಲಾಗಿದೆ.

ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದ್ದು, ಗಣ್ಯ ವ್ಯಕ್ತಿಗಳ ಕಾರ್ಯಕ್ರಮಕ್ಕೆ ಯಾವ ರೀತಿಯ ಭದ್ರತೆ ನೀಡಬೇಕು ಆ ರೀತಿಯ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸರು ಸೇರಿದಂತೆ ಹೆಚ್ಚುವರಿ ಪೊಲೀಸ್ ಪಡೆ ಕರೆಸಿಕೊಳ್ಳಲಾಗಿದೆ. ಅಮಿತಾ ಶಾ ಭೇಟಿ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಧರಣಿಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಕೇಲವರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಅದಕ್ಕೆ ಅವಕಾಶವಿಲ್ಲ. ಅಂತಹ ಘಟನೆಗಳೆನ್ನಾದರೂ ಆದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos