ದಿನಸಿ ಕಿಟ್ ವಿತರಣೆ

ದಿನಸಿ ಕಿಟ್ ವಿತರಣೆ

ಹೊಸಕೋಟೆ:ಸಮೇತನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಡವತ್ತಿ ಗ್ರಾಮದಲ್ಲಿ ಕೊರೋನಾ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಒಳಾಗಿದದ್ದ ಸುಮಾರು ಮುನ್ನೂರು ಕುಟುಂಬಗಳಿಗೆ ಶಾಸಕರಾದ ಶರತ್ ಬಚ್ಚೇಗೌಡ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಗೌಡ ದಿನ ಬಳಕೆಯ ದಿನಸಿ ಪದಾರ್ಥಗಳು ಹಾಗೂ ತರಕಾರಿಗಳನ್ನೊಗೊಂಡ ಕಿಟ್‌ನ್ನು ವಿತರಣೆ ಮಾಡಿದರು.
ನಡವತ್ತಿ ಗ್ರಾಮದಲ್ಲಿ ಮಳೆನೀರು ಸಂಗ್ರಹಣೆ ಮಾಡಿ ಅಂತರ್ಜಲ ವೃದ್ಧಿ ಪಡಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕಲ್ಯಾಣಿ ಕಾಮಗಾರಿ ವೀಕ್ಷಣೆ ಮಾಡಿ ಪರಿಶೀಲಿಸಿದರು.

ನಂತರ ಗ್ರಾಮಸ್ಥರನ್ನು ಭೇಟಿ ಮಾಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಶೀಘ್ರ ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಕೋಡಿಹಳ್ಳಿ ಸುರೇಶ್, ಗೋಪಾಲಪ್ಪ, ವೆಂಕಟೇಶ್, ಕುಮಾರ್, ಗ್ರಾವi ಪಂಚಾಯ್ತಿ ಸದಸ್ಯ ಸಂತೋಷ್, ಮುನೇಶ್, ಬದ್ರಿ, ಅರವಿಂದ್, ದಯಾನಂದ್, ಅವಿನಾಶ್. ಹಾಗೂ ಮೊದಲಾದವರು ಉಪಸ್ಥಿತರಿದ್ದರು

ಫ್ರೆಶ್ ನ್ಯೂಸ್

Latest Posts

Featured Videos