ಮೈಸೂರು, ಮೇ.2, ನ್ಯೂಸ್ ಎಕ್ಸ್ ಪ್ರೆಸ್: ಮೈಸೂರು ಕ್ಷೇತ್ರದ ವಿಚಾರದ ಬಗ್ಗೆ ಮಾತನಾಡಿದ ಜೆಡಿಎಸ್ ನ ನಾಯಕರಿಬ್ಬರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ಅವರು ಮೈಸೂರು ಕ್ಷೇತ್ರದ ವಿಚಾರದಲ್ಲಿ ನಡೆದುಕೊಂಡ ರೀತಿಗೆ ಕೋಪಗೊಂಡ ಸಿದ್ದರಾಮಯ್ಯನವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ಸಚಿವ ಸಂಪುಟದಿಂದ ಉಭಯ ಸಚಿವರನ್ನು ಕೈ ಬಿಡುವಂತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೂಚನೆ ನೀಡುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಆದರೆ ಲೋಕಸಭೆ ಚುನಾವಣೆ ಫಲಿತಾಂಶ ಬರುವವರೆಗೂ ಕಾಯುವುದು ಒಳಿತು. ಅಲ್ಲಿಯವರೆಗೂ ಯಾವುದೇ ಆತುರದ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ವೇಣುಗೋಪಾಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.