ಗುಲಾಂ ನಬಿ ಆಜಾದ್ ಗೆ ಆಘಾತ

ಗುಲಾಂ ನಬಿ ಆಜಾದ್ ಗೆ  ಆಘಾತ

ಶ್ರೀನಗರ, ಆ. 8 : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಕಲಂ 370 ರದ್ದುಗೊಂಡ ಬಳಿಕ ಶ್ರೀನಗರಕ್ಕೆ ಗುರುವಾರ ಆಗಮಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ಗೆ ಆಘಾತ ಕಾದಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲೇ ಅವರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ನಗರದೊಳಗೆ ಪ್ರವೇಶಿಸಲು ನಿರ್ಬಂಧವಿದೆ ಎಂದು ಹೇಳಿದ್ದಾರೆ. ಕಲಂ 370ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಹಲವೆಡೆ ಸುರಕ್ಷತಾ ದೃಷ್ಟಿಯಿಂದ ಕರ್ಪ್ಯೂ ಹೇರಲಾಗಿದೆ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಹಲವು ನಾಯಕರಿಗೆ ನಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos