ಗುಂಡು ಹಾರಿಸಿ ಮಗನ ಹೊಟ್ಟೆ ಸೀಳಿದ ತಂದೆ

ಗುಂಡು ಹಾರಿಸಿ ಮಗನ ಹೊಟ್ಟೆ ಸೀಳಿದ ತಂದೆ

ಕಾರವಾರ,ಜೂ. 20: ಕುಡಿದ ಅಮಲಿನಲ್ಲಿ ಮಗನ ಮೇಲೆ ತಂದೆಯೇ ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನರೇಬೈಲ್ ನಲ್ಲಿ ನಡೆದಿದೆ. ರಾವಯ್ಯ ಗುಂಡು ಹಾರಿಸಿದ ತಂದೆ. ಈ ವೇಳೆ ಜಗಳ ತಾರಕಕ್ಕೇರಿದ್ದು ಕುಡಿದ ಅಮಲಿನಲ್ಲಿ ಇದ್ದ ತಂದೆ ರಾವಯ್ಯ ಬಂದೂಕಿನಿಂದ ಗುಂಡು ಹಾರಿಸಿದ್ದು, ಪರಿಣಾಮ ಮಗನ ಹೊಟ್ಟೆ ಸೀಳಿದೆ. ನಾಗೇಂದ್ರ ಗುಂಡು ತಗುಲಿ ತೀವ್ರ ಅಸ್ವಸ್ಥಗೊಂಡಿದ್ದಾನೆ.

ರಾವಯ್ಯ ಹಾಗೂ ನಾಗೇಂದ್ರ ನಡುವೆ ಆಸ್ತಿ ಸಂಬಂಧ ಮನಸ್ತಾಪ ಇತ್ತು. ವಿಚಾರದ ಬಗ್ಗೆ ಮಾತುಕತೆ ನಡೆದಿದೆನಾಗೇಂದ್ರನ ಹೊಟ್ಟೆಗೆ ಗುಂಡು ಬೀಳುತ್ತಿದ್ದಂತೆ ರಾವಯ್ಯ ಗಾಬರಿಗೊಂಡು ಮಗನನ್ನು ಶಿರಸಿ ಟಿಎಸ್‍ಎಸ್ ಆಸ್ಪತ್ರೆಗೆ ಕೊರೆದುಕೊಂಡು ಹೋಗಿದ್ದಾನೆ. ಸದ್ಯ ನಾಗೇಂದ್ರಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುದಿದ್ದಾನೆ. ಈ ಬಗ್ಗೆ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆಯನ್ನು ವಶಕ್ಕೆ ಪಡೆಯಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos