‘ನಮ್ಮ ನೀರು, ನಮ್ಮ ಹಕ್ಕು’ ಹೋರಾಟಕ್ಕೆ H.D ದೇವೇಗೌಡ ಸಾಥ್

‘ನಮ್ಮ ನೀರು, ನಮ್ಮ ಹಕ್ಕು’ ಹೋರಾಟಕ್ಕೆ H.D ದೇವೇಗೌಡ ಸಾಥ್

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ‘ನಮ್ಮ ನೀರು, ನಮ್ಮ ಹಕ್ಕು’ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಾಥ್ ನೀಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ ‘ನಮ್ಮ ನೀರು, ನಮ್ಮ ಹಕ್ಕು’ ಹೋರಾಟಕ್ಕೆ ಮಾಜಿ ಪ್ರಧಾನಿ ಶ್ರೀ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್ ಪಕ್ಷವು “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು.

 

ಫ್ರೆಶ್ ನ್ಯೂಸ್

Latest Posts

Featured Videos