ಎಚ್ ಡಿ ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಜೋಷಿ

ಎಚ್ ಡಿ ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಜೋಷಿ

ನವದೆಹಲಿ, ಜೂ. 27: 2019ರ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಗನ ನಿಖಿಲ್  ಕುಮಾರಸ್ವಾಮಿ ಸೋಲಿನ ಬಳಿಕ ಸಿಎಂ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಲೇವಡಿ ಮಾಡಿದ್ದಾರೆ.

ಇಂದು ಸಚಿವ ಪ್ರಹ್ಲಾದ್ ಜೋಷಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಜನರು ಮತ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ. ಅವರು ಇನ್ನೂ ಯಾಕೆ ಸಿಎಂ ಆಗಿದ್ದಾರೆ? ಕಾಂಗ್ರೆಸ್ನೊಂದಿಗೆ ಅನಾರೋಗ್ಯಕರ ಮೈತ್ರಿಯಲ್ಲಿ ಮುಂದುವರಿಯುತ್ತಿದ್ದಾರೆ ಎಂದರು.

ವೋಟ್ ಮಾತ್ರ ಮೋದಿಗೆ ಹಾಕ್ತೀರಿ, ಸಮಸ್ಯೆ ಮಾತ್ರ ನನ್ನತ್ರ ಹೇಳ್ತೀರಿ. ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ

ವಿವಾದಾತ್ಮಕ ಹೇಳಿಕೆ ಕುರಿತಾಗಿನ ಪ್ರಶ್ನೆಗೆ ಜೋಷಿ ಅವರು ಈ ಉತ್ತರ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಸ್ಪಷ್ಟನೆಯನ್ನೂ ನೀಡಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos