ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲೆ ಮಹದೇಶ್ವರ ದೇವರಿಗೆ ಸುಮಾರು ಕೆಜಿ ಬೆಳ್ಳಿಯನ್ನು ಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆ, ಸಮಾರಂಭಗಳಲ್ಲಿ ಬೆಳ್ಳಿ ಗದೆ, ಬೆಳ್ಳಿ ಕತ್ತಿ ಹೀಗೆ ಅನೇಕ ಉಡುಗೊರೆ ಬಂದವು. ಅದೆಲ್ಲವನ್ನೂ ಸೇರಿಸಿ ಸುಮಾರು 700 ಕೆ.ಜಿ. ಬೆಳ್ಳಿಯನ್ನು ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಟ್ಟುಬಿಟ್ಟರು. ಇದಕ್ಕೆ ಪ್ರಚಾರವನ್ನೂ ಪಡೆಯಲಿಲ್ಲ ಎಂದು ಹುಣಸೂರು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಹೇಳಿದರು. ಅದನ್ನು ಪ್ರಚಾರ ಮಾಡಿಕೊಳ್ಳಲಿಲ್ಲ. ನಾವು ಸೀತಾರಾಮ ಅಂತ ನಮಸ್ಕಾರ ಮಾಡುತ್ತೇವೆ. ಬಿಜೆಪಿಯವರು ಜೈ ಶ್ರೀರಾಮ್ ಅಂತ ಕೂಗುತ್ತಾರೆ. ಯಾವ ರೀತಿ ಭಕ್ತಿ ಬೇಕು ಅಂತ ನಾವು ಡಿಸೈಡ್ ಮಾಡಬೇಕು ಎಂದು ಹೇಳಿದರು.