ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ

ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ

ನವದೆಹಲಿ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಪಕ್ಷದ ರಾಜ್ಯ ಘಟಕ ಆಯೋಜಿಸಿದ್ದ ‘ಜನ್ ಆಕ್ರೋಶ್ ಸಭಾ’ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆ ಮೇಲೆ ಏರಿ ಬಂದ ಅಪಚಿತ ವ್ಯಕ್ತಿಯೊಬ್ಬ, ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ಕಪಾಳ ಮೋಕ್ಷ ಮಾಡಿದ ಆಘಾತಕಾರಿ ಘಟನೆ ಇಂದು ನಡೆದಿದೆ.

ಪಾಟಿದಾರ್ ಮೀಸಲಾತಿ ಹೋರಾಟದ ನಾಯಕ ಪಟೇಲ್ ಬಲ ಕೆನ್ನೆಗೆ ಹೊಡೆದ ವ್ಯಕ್ತಿಯನ್ನು ಇನ್ನಷ್ಟೇ ಗುರುತಿಸಬೇಕಾಗಿದೆ. ಆತನ ಆಕ್ರೋಶಕ್ಕೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಆತನನ್ನು ವೇದಿಕೆಯಲ್ಲಿದ್ದ ಜನರು ತಕ್ಷಣವೇ ಹಿಡಿದು ಪೊಲೀಸರ ವಶಕ್ಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos