ಹಾಸನ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕುಟುಂಬ ಸಮೇತ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದ್ದಾರೆ.
ದೇವೇಗೌಡರು, ಚೆನ್ನಮ್ಮ ದೇವೇಗೌಡರು, ಸಚಿವ ಹೆಚ್.ಡಿ. ರೇವಣ್ಣ ಕುಟುಂಬ ಸಮೇತ ಪಡುವಲಹಿಪ್ಪೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.