ಹಕ್ಕು ಚಲಾಯಿಸಿದ ಎಸ್.ಎಂ.ಕೃಷ್ಣ

ಹಕ್ಕು ಚಲಾಯಿಸಿದ ಎಸ್.ಎಂ.ಕೃಷ್ಣ

ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ತಮ್ಮ ಹಕ್ಕು ಚಲಾಯಿಸಿದರು. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸದಾಶಿವನಗರದ ‘ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ’ಯಲ್ಲಿ ವೋಟ್ ಮಾಡಿದರು. ಪತ್ನಿ ಜೊತೆ ಆಗಮಿಸಿ ಎಸ್ ಎಂಕೆ ಮತದಾನ ಮಾಡಿದರು. ಇನ್ನು, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿಯಿಂದ ಡಿ.ವಿ.ಸದಾನಂದಗೌಡ ಸ್ಪರ್ಧಿಸಿದರೆ, ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣಬೈರೇಗೌಡ ಕಣದಲ್ಲಿದ್ದಾರೆ. ಅಲ್ಲದೇ ನಟ ಪ್ರಕಾಶ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos