ದೇವನಹಳ್ಳಿ, ಜು. 26 : ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಾಗುವಳಿ ಚೀಟಿ ನೀಡದೆ ನೆನೆಗುದ್ದಿಗೆ ಬಿದ್ದಿದ್ದ ಸಾಗುವಳಿ ಚೀಟಿಯನ್ನು ಬಡಜನರಿಗೆ ಹಾಗೂ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಇರುವವರಿಗೆ ಈಗ ಸಾಗುವಳಿ ಚೀಟಿ ನೀಡಿ ಶಾಶ್ವತ ಪರಿಹಾರ ಸಿಗುವಂತೆ ಮಾಡಲಾಗಿದೆ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸಾಗುವಳಿ ಚೀಟಿ ಮತ್ತು 94ಸಿಯಲ್ಲಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವಾರು ವರ್ಷಗಳಿಂದ ಬಾಕಿ ಉಳಿದುಕೊಂಡಿರುವ 35 ಸಾಗುವಳಿ ಚೀಟಿ ಹಾಗೂ ಮನೆಗಳಲ್ಲಿ ವಾಸ ಮಾಡಿಕೊಂಡು ಇದ್ದ 50 ಫಲಾನುಭವಿಗಳಿಗೆ 94 ಸಿ ಯಲ್ಲಿ ಹಕ್ಕುಪತ್ರವನ್ನು ನೀಡಲಾಗಿದೆ. 1300 ಜನರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ಸಿದ್ದಪಡಿಸಲಾಗಿದೆ. ಇಷ್ಟು ಜನರಿಗೂ ಶಾಶ್ವತವಾಗಿ ಉಳಿಯುವಂತೆ ಮಾಡಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಅದರಲ್ಲೂ ಸಹ ನುಡಿದಂತೆ ನಡೆದುಕೊಂಡು ಬಂದಿದ್ದಾರೆ. ಇನ್ನು8-10 ತಿಂಗಳು ಸರ್ಕಾರ ಮುಂದುವರೆದಿದ್ದರೆ ಮಾದರಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗುತ್ತಿದ್ದರು. ಯಾವುದೇ ಕಾರಣಕ್ಕೂ ಒಂದು ಇಂಚು ಜಮೀನನ್ನು ಮಾರಾಟ ಮಾಡಬೇಡಿ. ಮಾರಾಟ ಮಾಡಿಕೊಂಡವರ ಸ್ಥಿತಿ ಯಾವ ರೀತಿ ಇದೆ ಎಂಬುವುದು ನನಗೆ ತಿಳಿದಿದೆ. ತಾಲೂಕಿನಲ್ಲಿ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಶಾಸಕನಾಗಿ 14 ತಿಂಗಳು ಆಗಿದೆ. 170 ಕೋಟಿ ಅನುದಾನವನ್ನು 2 ತಿಂಗಳಿನಲ್ಲಿ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 120ಕೋಟಿ ಮಂಜೂರು ಮಾಡಿದ್ದೇನೆ ಎಂದು ಹೇಳಿದ್ದಾರೆ. ಅದರಂತೆ ತಾಲೂಕಿನಲ್ಲಿ ಹೆಚ್ಚಿನ ಮುಖ್ಯಮಂತ್ರಿ ಪರಿಹಾರ ನಿಧಿಯನ್ನು ತಂದಿದ್ದೇನೆ. ತಾಲೂಕು ಕಚೇರಿಗೆ ಜನ ಅಲೆದಾಡದಂತೆ ತಕ್ಷಣ ಕೆಲಸಗಳು ಆಗುವಂತೆ ಆಗಬೇಕು. ಪಾರದರ್ಶಕವಾಗಿ ಸಾಗುವಳಿ ಮತ್ತು ಹಕ್ಕುಪತ್ರವನ್ನು ನೀಡುತ್ತಿದ್ದೇವೆ. ಇದರಿಂದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಿದೆ. ನನ್ನ ಅವಧಿಯಲ್ಲಿ ಮಾಡಿರುವ ಕೆಲಸಗಳು ನನಗೆ ತೃಪ್ತಿ ತಂದಿದೆ. ನನಗೆ ಯಾವುದೇ ಆಸೆ ಆಮಿಷಗಳಿಲ್ಲ ತಾಲೂಕಿನ ಸರ್ವತೋಮುಖ ಅಭಿವೃದ್ದಿಯೇ ನನ್ನ ಗುರಿಯಾಗಿದೆ. ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡಬೇಡಿ ತಾಲೂಕಿನ ಜನ ಶಾಂತಿ ನೆಮ್ಮದಿಯಿಂದ ಬಾಳಬೇಕು. ಯಾವುದೇ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು. ನಿಮ್ಮ ಸಮಸ್ಯೆ ಇದ್ದರೆ ನೇರವಾಗಿ ನನ್ನ ಬಳಿ ಬನ್ನಿ ಬಗೆಹರಿಸಿಕೊಡಲಾಗುತ್ತದೆ. 40ಕಿ.ಮೀ.ಗಳ ರಸ್ತೆಯನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ತಹಶಿಲ್ದಾರ್ ಕೇಶವಮೂರ್ತಿ, ಗ್ರೆಡ್-2 ತಹಸೀಲ್ದಾರ್ ಅನಿಲ್ ಕುಮಾರ್, ಆರ್.ಐ ಚಂದ್ರಶೇಖರಯ್ಯ, ಪುರಸಭಾ ಸದಸ್ಯ ಎಸ್. ನಾಗೇಶ್, ಜೆಡಿಎಸ್ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಕುಂದಾಣ ಹೋಬಳಿ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಮನಗೊಂಡಹಳ್ಳಿ ಜಗದೀಶ್, ಹಾಪ್ಕಾಮ್ಸ್ ನಿರ್ದೇಶಕ ಹುರುಳುಗುರ್ಕಿ ಶ್ರೀನಿವಾಸ್, ವಿಶ್ವನಾಥಪುರ ಗ್ರಾ.ಪಂ ಅಧ್ಯಕ್ಷ ರಾಮಮೂರ್ತಿ, ಬೇಕರಿ ಮಂಜುನಾಥ್, ಕೋರಮಂಗಲ ವೀರಪ್ಪ, ಕಗ್ಗಲಹಳ್ಳಿ ಗುರಪ್ಪ, ಸಿ.ಆರ್.ಪಟ್ಣ ಹೋಬಳಿ ಅಧ್ಯಕ್ಷ ಮುನಿರಾಜು, ರೆಡ್ಡಿಹಳ್ಳಿ ಮುನಿರಾಜು, ಬಿಜ್ಜವಾರ ಆನಂದ್, ಕಾರಹಳ್ಳಿ ಮುನಿಕೃಷ್ಣಪ್ಪ, ಮತ್ತಿತರರು ಇದ್ದರು.