ಚಾಮರಾಜನಗರ , ಸೆ. 20 : ಟ್ರಾಫಿಕ್ ನಿಯಮಗಳನ್ನು ಪಾಲನೆ ಮಾಡದಿದ್ದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ ಎಂದು ಸಾರ್ವಜನಿಕರಿಗೆ ಸಂಚಾರಿ ಪೊಲೀಸರು ಸೂಚನೆ ನೀಡುತ್ತಾರೆ.
ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ದಂಡದ ಮೊತ್ತ ಹೆಚ್ಚಿಸಿದ ನಂತರ ಸಂಚಾರಿ ಪೊಲೀಸರ ಕಾರ್ಯಾಚರಣೆ ಜೋರಾಗಿದೆ. ಚಾಮರಾಜನಗರದಲ್ಲಿ ಸಂಚಾರಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ನಂಜಪ್ಪ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಚೆಕ್ಕಿಂಗ್ ವೇಳೆ ವಾಹನದ ಚಾಲಕನೊಬ್ಬನಿಗೆ ಅಧಿಕೃತ ರಶೀದಿ ನೀಡದೆ ವಾಹನ ಚಾಲಕ ನೀಡಿದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ.
ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ಪೊಲೀಸರ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.