ಹಂಪಿ ಉತ್ಸವ ಬಗ್ಗೆ ಚರ್ಚೆ

ಹಂಪಿ ಉತ್ಸವ ಬಗ್ಗೆ ಚರ್ಚೆ

ಬಳ್ಳಾರಿ, ಅ. 16 : ಸಚಿವ ಸಂಪುಟದಲ್ಲಿ ಹಂಪಿ ಉತ್ಸವ ಮಾಡುವ ಬಗ್ಗೆ ಚರ್ಚೆ. ರಾಜ್ಯದಲ್ಲಿ ಅತಿವೃಷ್ಠಿ ಇರುವ ಕಾರಣ ಸರಳವಾಗಿ ಆಚರಿಸಲು ಸಿಎಂ ಸೂಚಿಸಿದ್ದಾರೆ. 2ದಿನ ಹಂಪಿ ಉತ್ಸವ ಮಾಡಲಾಗುವುದು. ಯಾವುದೇ ಕಾರಣಕ್ಕೂ ಹಂಪಿ ಉತ್ಸವ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.” ನೇಕಾರರು ಹಾಗೂ ರೈತರ ಸಾಲಮನ್ನಾ ವಿಚಾರದಲ್ಲಿ ಸಾಕಷ್ಟು ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಬಳಿ ಚರ್ಚೆ ಮಾಡಿ, ಈ ವಿಚಾರವನ್ನು ಅವರ ಗಮನಕ್ಕೆ ತರಲಾಗುವುದು. ಸಾಲಮನ್ನಾ ವಿಚಾರದಲ್ಲಿ ನಮಗೂ ಗೊಂದಲ ಇದೆ. ಈ ಹಿಂದೆ ಸಿಎಂ ಆಗಿದ್ದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯನವರಿಗೂ ರೈತರ ಸಾಲಮನ್ನಾದ ಬಗ್ಗೆ ಸ್ಪಷ್ಟತೆ ಇರಲಿಲ್ಲ,” ಎಂದರು.

ಫ್ರೆಶ್ ನ್ಯೂಸ್

Latest Posts

Featured Videos