ಹೊಸದಿಲ್ಲಿ, ಡಿ. 6: ಕ್ರಿಕೆಟ್ ತಂಡದ ನಾಲ್ವರು ಪ್ರಮುಖ ಆಟಗಾರರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದಂದೇ ರವೀಂದ್ರ ಜಡೇಜಾ ಹಾಗೂ ಶ್ರೇಯಸ್ ಅಯ್ಯರ್ ಹೈದರಾಬಾದ್ನಲ್ಲಿ ನಡೆಯಲಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲಿದ್ದಾರೆ.
ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಮೂಡಿ ಬಂದಿರುವ ರೀತಿಯು ಎಲ್ಲರಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ. ಶ್ರೇಯಸ್ ಅಯ್ಯರ್ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ತಮ್ಮ ಸ್ಥಾನ ಗಟ್ಟಿ ಮಾಡಿದ್ದು, ನಾಲ್ಕನೇ ಕ್ರಮಾಂಕಕ್ಕೆ ಸೂಕ್ತವೆನಿಸಿದ್ದಾರೆ.
ಇನ್ನೊಂದೆಡೆ ಗಾಯದ ಸಮಸ್ಯೆಯಿಂದಾಗಿ ದೀರ್ಘ ಕಾಲದಿಂದ ಹೊರಗುಳಿದಿರುವ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ತ್ರಿಶತಕ ವೀರ ಕರ್ನಾಟಕದ ಕರುಣ್ ನಾಯರ್ ಅವರು ಕೂಡ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.