ರಾಜಕೋಟ್,ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಹಾರ್ದಿಕ್ ಪಟೇಲ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮಾ.7ರಂದು ರಾತ್ರಿ ನಡೆದಿದೆ.
ಗುಜರಾತಿನ ರಾಜ್ ಕೋಟ್-ಛೋಟಿಲಾ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಹಾರ್ದಿಕ್ ಪಟೇಲ್ ಅವರಿದ್ದ ಎಸ್ ಯುವಿಯು ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬೈಕಿನಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ. ಅದೃಷ್ಣವಶಾ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ, ಹಾರ್ದಿಕ್ ಪಟೇಲ್ ಅವರೂ ಕ್ಷೇಮವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಾರ್ದಿಕ್ ಪಟೇಲ್ ಅವರ ಎಸ್ ಯುವಿಗೆ ಹಾನಿಯಾಗಿದ್ದು, ಘಟನೆಯ ನಂತರ ಪೊಲೀಸರು ಮತ್ತು ಹಾರ್ದಿಕ್ ಪಟೇಲ್ ಅವರ ನಡುವೆ ಮಾತಿನ ಚಕಮಕಿ ನಡೆಯಿತು ಎನ್ನಲಾಗಿದೆ. ಹಾರ್ದಿಕ್ ಪಟೇಲ್ ಅವರೊಂ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಬೇದಿಕೆಯೊಂದಿಗೆ ಸಾಮಾಜಿಕ ಹೋರಾಟಕ್ಕಿಳಿದ 25 ವರ್ಷದ ಹಾರ್ದಿಕ್ ಪಟೇಲ್ ಮಾ. 12 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಗುಜರಾತಿನ ಜಾಮ್ನಗರ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆ ಇದೆ.