ಶಿವುಗೆ ಸಂಕಷ್ಟದ ಮೇಲೆ ಸಂಕಷ್ಟ!

ಶಿವುಗೆ ಸಂಕಷ್ಟದ ಮೇಲೆ ಸಂಕಷ್ಟ!

ಬೆಂಗಳೂರು, ಸೆ. 16: ಕಳೆದ ಒಂದು ವಾರದಿಂದ ಇಡಿ ವಿಚಾರಣೆಗೆ ಒಳಪಟ್ಟಿರುವ ಕಾಂಗ್ರೆಸ್ ನ ಮಾಜಿ ಸಚಿವ ಡಿಕೆಶಿ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ.

ಹೌದು, ಇದೀಗ ರಾಜ್ಯ ಸರ್ಕಾರ ಡಿಕೆಶಿ ನೀರಾವರಿ ಸಚಿವರಾಗಿದ್ದಾಗ  ನಡೆದಿತ್ತೆನ್ನಲಾಗಿದೆ ಹಗರಣದ ಬಗ್ಗೆ ತನಿಖೆ ನಡೆಸಲು ಸಿಎಂ ಆದೇಶಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಡಿಕೆಶಿ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ನಿಯಮ ಮೀರಿ ಟೆಂಡರ್ ನೀಡಿದ್ದರು. ಇಲಾಖೆಯಲ್ಲಿ ಯಾವುದೇ ಸಭೆ ನಡೆಸದೇ ಸುಮಾರು 8 ಸಾವಿರ ಕೋಟಿ ಬಜೆಟ್ ಮೊತ್ತವನ್ನು 23 ಸಾವಿರ ಕೋಟಿಗೆ ಏರಿಕೆ ಮಾಡಿ ನೀರಾವರಿ ಯೋಜನೆಗಳಿಗೆ ಡಿಕೆಶಿ ಒಪ್ಪಿಗೆ ಸೂಚನೆ ನೀಡಿದ್ದರು.

ಈ ಟೆಂಡರ್ ನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಮೇಲ್ನೋಟಕ್ಕೆ ಭ್ರಷ್ಟಾಚಾರ ಎಸಗಿರುವ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸಿಎಂ ಅವರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos