ಹಾಸನ, ಅ. 5 : ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬಂತೆ ಹಾಸನ ಜಿಲ್ಲೆಯ ವಿವಿಧ ತಾಲೂಕಿನ ತಹಸೀಲ್ದಾರರು ಮದ್ಯದ ಬಾಟಲಿಗಳನ್ನು ಸಾಗಿಸಲು ಸರ್ಕಾರಿ ಜೀಪ್ ಅನ್ನೇ ಬಳಕೆ ಮಾಡಿಕೊಂಡು ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಜಿಲ್ಲೆಯ ಹೊಳೆನರಸೀಪುರದ ಪ್ರವಾಸಿ ಮಂದಿರದಲ್ಲಿ ತಮ್ಮ ವರ್ತನೆಯನ್ನು ಪ್ರಶ್ನಿಸಿದವರನ್ನೇ ಪೊಲೀಸರಿಗೆ ಹಿಡಿದುಕೊಟ್ಟು, ಚೆನ್ನಾಗಿ ಒದೆ ತಿನ್ನುವಂತೆ ಮಾಡಿದ್ದಾರೆ. ಪ್ರವಾಸಿ ಮಂದಿರದಲ್ಲಿ ಒಟ್ಟು ಸೇರಿದ್ದ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳ ತಹಸೀಲ್ದಾರರು ಎಣ್ಣೆ ಪಾರ್ಟಿ ಮಾಡಿದ್ದರು. ಪಾರ್ಟಿ ಮಾಡಲು ಅವಶ್ಯಕ ಆಹಾರ, ಇದನ್ನು ಗಮನಿಸಿದ ಬಿಜೆಪಿಯ ಯುವಮೋರ್ಚಾ ಅಧ್ಯಕ್ಷ ನಾಗೇಶ್ ಮೊಬೈಲ್ನಲ್ಲಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದರು. ಇದನ್ನು ಗಮನಿಸಿದ ತಹಸೀಲ್ದಾರರ ತಂಡ ತಕ್ಷಣವೇ ಹೊಳೆನರಸೀಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಪಿಎಸ್ಐ ನಾಗೇಶ್ ಏನು, ಎತ್ತ ಎಂದು ವಿಚಾರಿಸದೆ ನಾಗೇಶ್ ಮೇಲೆ ಹಲ್ಲೆ ಮಾಡಿದರು. ಜತೆಗೆ ನಾಗೇಶ್ ವಿರುದ್ಧವೇ ದೂರು ದಾಖಲಿಸಿಕೊಂಡರು ಎನ್ನಲಾಗಿದೆ.