ನವದೆಹಲಿ, ಮಾ.6, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ .ಡಿ.ದೇವೇಗೌಡರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಭೇಟಿಯಾದರು.
ನವದೆಹಲಿಯ ಸಫ್ಜರ್ ಜಂಗ್ ರಸ್ತೆಯಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾದ ರಾಹುಲ್ ಗಾಂಧಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದರು.
ಸೀಟು ಹಂಚಿಕೆಯ ವಿಚಾರದಲ್ಲಿ ಸ್ಥಳೀಯ ನಾಯಕರಿಂದ ಇಥ್ಯರ್ಥವಾಗದೆ ಗೊಂದಲ ಮೂಡಿದ್ದ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ವರಿಷ್ಠರು ಈ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ.