ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಬಹಳ ಆಶಾದಾಯಕ ಮಾತುಗಳನ್ನು ಆಡಿದ್ದಾರೆ. ರಾಷ್ಟ್ರೀಯ ಮಾಧ್ಯಮಕ್ಕೆ ಈ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ,
ಮುಂದಿನ ದಿನಗಳಲ್ಲಿ ಬಿಜೆಪಿಯವರು ನಮ್ಮನ್ನು ಹೇಗೆ ನಡೆಸಿಕೊಳ್ಳಲಿದ್ದಾರೋ ಅದರ ಆಧಾರದ ಮೇಲೆ ನಾವು ಮೈತ್ರಿ ಮುಂದುವರೆಯುವ ಬಗ್ಗೆ ನಿರ್ಧರಿಸಬಹುದು. ನಾನೂ ಕೂಡ ಮೈತ್ರಿ ಮಾಡಿಕೊಳ್ಳಲು ಬಯಸಿದ್ದೆವು. ಬಿಜೆಪಿಯವರು ನಮ್ಮೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಹೊರಟಿದ್ದರೆ.
ನಾವು ಈ ಮೈತ್ರಿಯನ್ನು ದೀರ್ಘಕಾಲ ಮುಂದುವರಿಸಲು ಬಯಸುತ್ತೇವೆ. ಆದ್ರೆ ಈ ನಿರ್ಧಾರ ಅವರ ವರ್ತನೆಯ ಮೇಲೆಯೇ ಅವಲಂಬಿತವಾಗಿರುತ್ತದೆ, ಅವರು ನಮ್ಮ ಪಕ್ಷದ ನಾಯಕರನ್ನು ಹೇಗೆ ನಡೆಸಿಕೊಳ್ಳಲಿದ್ದಾರೆ ಎಂಬುದರ ಮೇಲೆ ಭವಿಷ್ಯ ತೀರ್ಮಾನವಾಗಲಿದೆ ಎಂದು ಹೇಳಿದರು.