ಈ ಬಾರಿ ನನಗೆ ಗೆಲುವು ಖಚಿತ: HDK

ಈ ಬಾರಿ ನನಗೆ ಗೆಲುವು ಖಚಿತ: HDK

ಮಂಡ್ಯ: ಲೋಕಸಭಾ ಚುನಾವಣೆ ರಾಜ್ಯದ 14 ಕ್ಷೇತ್ರಗಳಲ್ಲಿ ನಿನ್ನೆ ಮೊದಲನೇ ಹಂತದ ಮತದಾನ ನಡೆದಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಜನ ನನ್ನನ್ನು ಗೆಲ್ಲಿಸಿದ್ದಾರೆ. ಈ ಜಯ ನನ್ನದಲ್ಲಾ, ಜಿಲ್ಲೆಯ ಜನತೆಯದ್ದು, ಜಿಲ್ಲೆಯ ಜನ ನನ್ನ ಪರ ಪ್ರಚಾರ ಮಾಡಿ, ಚುನಾವಣೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷಾತೀತಾಗಿ ನನ್ನನ್ನು ಬೆಂಬಲಿಸಿದ್ದಾರೆ. ಹಾಗಾಗಿ ಈ ಜಯ ನನ್ನದಲ್ಲ, ಜಿಲ್ಲೆಯ ಜನರದ್ದು ಎಂದು ಫಲಿತಾಂಶ ಬರುವ ಮುನ್ನವೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುಮಲತಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಅವ್ರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ, ಇದಕ್ಕಿಂತ ಇನ್ನೇನು ಮಾಡಬೇಕು. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನ 2 ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಬೆಂಗಳೂರಿನಿಂದ ಬಂದು ಸುಮಲತಾ ನನಗೆ ಓಟ್ ಮಾಡಿದ್ದಾರೆ. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ಮಂಡ್ಯದಿಂದ ರಾಜ್ಯದಲ್ಲೇ ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಗೊಂದಲಕ್ಕೆ ತೆರೆ ಎಳೆದರು.

ಫ್ರೆಶ್ ನ್ಯೂಸ್

Latest Posts

Featured Videos