ಕಾಂಗ್ರೆಸ್‌ ವಿರುದ್ದ ಹೆಚ್‌ ಡಿ ಕೆ ವಾಗ್ದಾಳಿ

ಕಾಂಗ್ರೆಸ್‌ ವಿರುದ್ದ ಹೆಚ್‌ ಡಿ ಕೆ ವಾಗ್ದಾಳಿ

ರಾಮನಗರ,ಸೆ. 20: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸಂಕಷ್ಟ ಸೂತ್ರ ಇಲ್ಲದಿರುವ ಸಮಯದಲ್ಲಿ ಇವರು ಯಾವ ಆಧಾರದ ಮೇಲೆ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಏನು ನಡೆದಿದೆ ಎಂದು ಎಲ್ಲರಿಗೂ ಗೊತ್ತಿದೆ. ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ವಿವರಿಸುವುದನ್ನು ಬಿಟ್ಟು, ಇನ್ನೂ ಅರ್ಜಿ ಹಾಕಲು ಆಲೋಚಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಇವರು ಅಣೆಕಟ್ಟು ಬರಿದಾದ ಮೇಲೆ ಕ್ರಮ ಕೈಗೊಳ್ಳುತ್ತಾರಾ. ನೀರಾವರಿ ಬಗ್ಗೆ ಇವರಿಗೆ ತಿಳುವಳಿಕೆ ಇಲ್ಲದಿದ್ದರೆ ಇದರ ಬಗ್ಗೆ ಗೊತ್ತಿರುವವರ ಹತ್ತಿರ ಸಲಹೆಯನ್ನು ಪಡೆದು ಮುನ್ನಡೆಯಬೇಕಿತ್ತು ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರ ಹೆಸರೇಳದೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

ಸಂಕಷ್ಟ ಸೂತ್ರ ರಚನೆಗೆ ರಾಜ್ಯದಲ್ಲಿ ಇಷ್ಟು ಹೊತ್ತಿಗೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸಂಕಷ್ಟ ಸೂತ್ರ ಇಲ್ಲದಿರುವಾಗ ಇವರು ಯಾವ ಆಧಾರದ ಮೇಲೆ ತಮಿಳುನಾಡಿಗೆ ನಿರು ಹರಿಸಿದ್ದಾರೆ. ಮೊದಲು ನಾವು ಏನು ಮಾಡಬೇಕು ಎಂದು ಸರ್ಕಾರ ಚಿಂತನೆ ನಡೆಸಿ ಆ ನಂತರ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos