ಬೆಂಗಳೂರು, ಡಿ. 10 : ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ನೂತನ ಶಾಸಕರು ಪ್ರಬಲ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ತಮಗೆ ಸಂಪದ್ಭರಿತ ಖಾತೆ ನೀಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ.ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ತಲೆನೋವಾಗಿ ಪರಿಣಮಿಸುವ ಸಾಧ್ಯತೆಗಳೇ ಹೆಚ್ಚಾಗಿವೆ.
ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ 12 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಈಗಾಗಲೇ ಖುದ್ದು ಮುಖ್ಯಮಂತ್ರಿಗಳೇ ಹೇಳಿದ್ದಾರೆ.
ವಾರಾಂತ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿದ್ದು, ಇರುವ ಸಂಪುಟದಲ್ಲಿ 16 ಖಾತೆಗಳಲ್ಲಿ ಪ್ರಬಲವಾದ ಖಾತೆಗಳನ್ನು ತಮಗೆ ಕೊಡುವಂತೆ ಗಾಡ್ಫಾದರ್ಗಳ ಮೂಲಕ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ.
ಸಮ್ಮಿಶ್ರ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ನಾನು ಉಪಚುನಾವಣೆಯಲ್ಲಿ ಗೆದ್ದು ಉಪಮುಖ್ಯಮಂತ್ರಿಯಾಗುವುದರ ಜತೆಗೆ ಜನಸಂಪನ್ಮೂಲ ಸಚಿವನಾಗುತ್ತೇನೆ ಎಂದು ಕ್ಷೇತ್ರದ ಜನತೆಗೆ ವಾಗ್ದಾನ ಮಾಡಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಈ ಖಾತೆಯನ್ನು ಡಿ.ಕೆ.ಶಿವಕುಮಾರ್ ನಿಭಾಯಿಸಿದ್ದರು. ನನಗೆ ಡಿ.ಕೆ.ಶಿವಕುಮಾರ್ ಖಾತೆಯನ್ನೇ ನೀಡಬೇಕೆಂದು ಮುಖ್ಯಮಂತ್ರಿ ಮೇಲೆ ರಮೇಶ್ ಜಾರಕಿಹೊಳಿ ಒತ್ತಡ ಹಾಕಿದ್ದಾರೆ.ಅಲ್ಲದೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಬಿಎಸ್ವೈ ನಿಮಗೆ ಜಲಸಂಪನ್ಮೂಲ ಖಾತೆಯನ್ನೇ ನೀಡುತ್ತೇವೆಂದು ಭರವಸೆ ಕೊಟ್ಟಿದ್ದರು. ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕಾದ ಇಕ್ಕಟ್ಟಿನಲ್ಲಿ ಸಿಎಂ ಇದ್ದಾರೆ.