ಕೊರೋನಾ ನಿಯಂತ್ರಣಕ್ಕೆ ಆರೋಗ್ಯ ಹಸ್ತ

ಕೊರೋನಾ ನಿಯಂತ್ರಣಕ್ಕೆ ಆರೋಗ್ಯ ಹಸ್ತ

ಗೌರಿಬಿದನೂರು:ಕೊರೋನಾ ಸೊಂಕು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಜನರ ಪ್ರಾಣದ ಜತೆ ಚಲ್ಲಾಟವಾಡುತ್ತಿದ್ದಾರೆ ಎಂದು ಆರೋಗ್ಯ ಹಸ್ತ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ವಿಷಾದ ವ್ಯಕ್ತಪಡಿಸಿದರು.
ನಗರದ ಸೂರ್ಯ ಕಲ್ಯಾಣಮಂಟಪದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರದೇಶ ಕರ್ನಾಟಕ ಕಾಂಗ್ರೆಸ್ ಸಮಿತಿ ವತಿಯಿಂದ ಇಡೀ ರಾಜ್ಯದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಂದು ತಾಲೂಕಿನಲ್ಲೂ ಕೊರೋನಾ ವಾರಿರ‍್ಸ್ ತರಬೇತಿಯನ್ನು ನೀಡಿ , ಉಚಿತ ಕಿಟ್‌ಗಳನ್ನು ನೀಡಿ ಪ್ರತಿಯೊಂದು ಗ್ರಾಮದಲ್ಲೂ ಕೊರೋನಾ ತಪಾಸಣೆ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಇದಕ್ಕೆ 6 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos