ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ

ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ

ಬೆಂಗಳೂರು: ರಣಭೀಕರ ಬಿಸಿಲಿನಿಂದ ಹೈರಾಣಾಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ರಾಜ್ಯದಲ್ಲಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಜನರಿಗೆ ಮಳೆಯ ಸಿಂಚನೆ ದೊರೆತಿದೆ. ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯಮ ಚಂಡಮಾರುತ ಜೊತೆಗೆ ಮಳೆ ಬತಲಿದೆ. ಅಲ್ಲದೇ 40 ರಿಂದ 50 ಕೀಮಿ ವೇಗದಲ್ಲಿ ಗಾಳಿ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯಾಗಲಿದೆ. ಮೇಲಿನ ಈ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಹಾವೇರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಂಜೆ ಸುರಿದ ಮಳೆಗೆ ಹಾವೇರಿ ಜಿಲ್ಲೆಯ ಜನರ ಜೀವನ ಅಸ್ತವ್ಯಸ್ತವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos