ಬೆಂಗಳೂರು, ಸೆ. 11: ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಅರುಣನ ಆರ್ಭಟಕ್ಕೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿತ್ತು. ಹೌದು, ಇಂದು ಸಿಲಿಕಾನ್ ಸಿಟಿನಲ್ಲಿ ಸೂರ್ಯನ ದರ್ಶನವಾಗಲಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಅರುಣನ ಆರ್ಭಟ ಮತ್ತೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹೊಸನಗರ ಸೇರಿ ಅನೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ತಿಂಗಳ ಹಿಂದೆ ಕಾಣಿಸಿಕೊಂಡ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಕಾಣಿಸಿಕೊಂಡಿತ್ತು. ಈಗ ಮತ್ತೆ ಮಳೆ ಸುರಿಯುತ್ತಿದ್ದು, ಸಾಕಷ್ಟು ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಳೆದೊಂದು ವಾರದಿಂದ ಮಳೆ ಆರ್ಭಟ ಅಧಿಕಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಒಳಹರಿವಿನ ಮಟ್ಟ ಹೆಚ್ಚಾಗಿದ್ದು, ಕೆಲ ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.