ಬೆಂಗಳೂರು, ಜೂ. 27: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ರಾಷ್ಟ್ರಿಯ ‘207’ ಹೆದ್ದಾರಿಯನ್ನ ಇನ್ನೂ ಸರಿಪಡಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಾರ್ವಜನಿಕರಿಂದ ಇಂದು ಪ್ರತಿಭಟನೆ.
ದೊಡ್ಡಬಳ್ಳಾಪುರ ನಗರದ ಟಿಬಿ ಕ್ರಾಸ್ ನಲ್ಲಿ ಪ್ರತಿಭಟನೆ ನಡಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಾರ್ವಜನಿಕರು. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರೋರಾಷ್ಟ್ರಿಯ ಹೆದ್ದಾರಿ ಕಾಮಗಾರಿ.
ಕಾಮಗಾರಿ ಸ್ಥಗಿತ ಹಿನ್ನೆಲೆ ಪ್ರತಿನಿತ್ಯ ಹೆದ್ದಾರಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಅಂತ ಸಾರ್ವಜನಿಕರ ಆಕ್ರೋಶ.
ಹೊಸಕೋಟೆಯಿಂದ ದೇವನಹಳ್ಳಿ ದೊಡ್ಡಬಳ್ಳಾಪುರ ಮುಖಾಂತರ ದಾಬಸ್ ಪೇಟೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರಿಯ ಹೆದ್ದಾರಿ 207. ಪ್ರತಿನಿತ್ಯ ಇಲ್ಲಿ ಹೆದ್ದಾರಿ ತಡೆ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಟ್ರಾಪೀಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು.