ನವದೆಹಲಿ: ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಂಡಿಸಿದ ಎನ್ಡಿಎ ಸರಕಾರದ
2019-20ರ ಬಜೆಟ್ ಮುಖ್ಯಾಂಶಗಳು.
- 2020ರ ವೇಳೆ ನವಭಾರತ ನಿರ್ಮಾಣ ಮಾಡಲಿದ್ದೇವೆ
- ಭಾರತದಲ್ಲಿ ಭಯೋತ್ಪಾದನೆ, ಜಾತೀವಾದ ನಿಯಂತ್ರಣ ಮಾಡಿದ್ದೇವೆ
- ಜಿಡಿಪಿಯಲ್ಲಿ ಜಗತ್ತಿನ ಗಮನ ಸೆಳೆದಿದ್ದೇವೆ
- ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಹಣದುಬ್ಬರ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ
- ಕಳೆದ 5 ವರ್ಷಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿದ್ದೇವೆ.
- ಜಿಎಸ್ಟಿ ಹಾಗೂ ಇತರ ತೆರಿಗೆ ಮೂಲಕ ಆದಾಯ
- ವಿದೇಶಿ ನೇರ ಹೂಡಿಕೆ(ಎಫ್ಡಿಎ) ಪ್ರಮಾಣ ಹೆಚ್ಚಳ
- ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ
- ದಿವಾಳಿ ಹಂತದಲ್ಲಿದ್ದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಪುನಶ್ಚೇತನ.
- ಪ್ರಾಕೃತಿಕ ಸಂಪನ್ಮೂಲಗಳ ಸಮರ್ಪಕ ಬಳಕೆ
- ಬಡವರು, ಹಿಂದುಳಿದ ವರ್ಗಗಳ ಏಳಿಗೆಗೆ ಯೋಜನೆ.
- ರಾಜ್ಯಗಳ ತೆರಿಗೆ ಪ್ರಮಾಣ ಶೇಕಡ 32 ರಿಂದ ಶೇಕಡ 42 ಕ್ಕೆ ಏರಿಸಿದ್ದೇವೆ.
- ಕಳೆದ 5 ವರ್ಷಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಒಂದು ಕೋಟಿಗೂ ಅಧಿಕ ಮನೆಗಳ ನಿರ್ಮಾಣ.
- ದೇಶದ 22ನೇ ಏಮ್ಸ್ ಹರಿಯಾಣದಲ್ಲಿ ಆರಂಭ.
- ಎಲ್ಲ ವರ್ಗದ ಜನತೆಗೆ ಮೀಸಲಾತಿ ನೀಡುವ ಮೂಲಕ ಸಮಾನತೆ.
- ದೇಶದ ಎಲ್ಲಾ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಕ್ರಮ.
- ಜಾನುವಾರು ಸಾಕಾಣಿಕೆಗೆ ಬೇಕಾದ ಸಂಪೂರ್ಣ ನೆರವು.
- ಹೊಸ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ನಿರುದ್ಯೋಗ ನಿರ್ಮೂಲನೆಗೆ ಕ್ರಮ.
- ಉಡಾನ್ ಯೋಜನೆ ಮೂಲಕ ಸಾಮಾನ್ಯ ಜನರಿಗೆ ವಿಮಾನ ಯಾನ
- ದೇಶದಲ್ಲಿ 100ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದೇವೆ.
- ಕೇಂದ್ರ ಸರ್ಕಾರದ ಬಜೆಟ್ ನ ಮುಖ್ಯಾಂಶಗಳು
- ಮೊಬೈಲ್ ಡೇಟಾ ಬಳಕೆಯಲ್ಲಿ ಶೇಕಡಾ 50 ಪಟ್ಟು ಹೆಚ್ಚಳವಾಗಿದೆ
- ಸಿನಿಮಾ ಕ್ಷೇತ್ರಕ್ಕೆ ಏಕಗವಾಕ್ಷಿ ಪದ್ಧತಿ ಜಾರಿ
- ಐಟಿ ಇಲಾಖೆ ಸಂಪೂರ್ಣವಾಗಿ ಆನ್ಲೈನ್ ಆಗಿದೆ.
- ಮೇಕ್ ಇಂಡಿಯಾ ಯೋಜನೆಯಡಿಯಲ್ಲಿ ಮೋಬೈಲ್ ತಯಾರಿಸಲಾಗಿದೆ.
- ಟ್ಯಾಕ್ಸ್ ಸಂಗ್ರಹದಲ್ಲಿ ಹೆಚ್ಚಳವಾಗಿದೆ.
- ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ 12 ಲಕ್ಷ ಯುವಕರಿಗೆ ಉದ್ಯೋಗ ನೀಡಿದ್ದೇವೆ.
- ಗ್ರಾಮಗಳು ಡಿಜಿಟಲ್ ಗ್ರಾಮಗಳಾಗಿ ಬದಲಾಗಿವೆ
- ಜನಧನ್, ಆಧಾರ್ ದೇಶದ ಗೇಮ್ ಚೇಂಜರ್