ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್‍.ಕೆ.ಪಾಟೀಲ್‍ ರಾಜೀನಾಮೆ..!

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್‍.ಕೆ.ಪಾಟೀಲ್‍ ರಾಜೀನಾಮೆ..!

ಹುಬ್ಬಳ್ಳಿ, ಮೇ. 24, ನ್ಯೂಸ್‍ ಎಕ್ಸ್ ಪ್ರೆಸ್‍: ಕರ್ನಾಟಕದಲ್ಲಿ ಕಾಂಗ್ರೆಸ್‍ ಸೋತು ಸುಣ್ಣವಾಗಿದೆ. ಸೋಲಿನಿಂದ ಕೈ ನಾಯಕರು ಕಂಗೆಟ್ಟಿದ್ದಾರೆ. ರಾಜ್ಯದ ಕಾಂಗ್ರೆಸ್‍- ಜೆಡಿಎಸ್‍ ನಾಯಕರು ಸೋಲಿನ ಪರಾಮರ್ಶೆ ಮಾಡುತ್ತಿದ್ದಾರೆ. ಸೋಲಿನ ಹೊಣೆಹೊತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಹೆಚ್‍.ಕೆ.ಪಾಟೀಲ್ ರಾಜೀನಾಮೆ ನೀಡೋದಕ್ಕೆ ಮುಂದಾಗಿದ್ದಾರೆ. ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಹೆಚ್‍.ಕೆ.ಪಾಟೀಲ್‍ ಆಯ್ಕೆ ಮಾಡಲಾಗಿತ್ತು. ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್‍.ಕೆ ಪಾಟೀಲ್‍  ತಮ್ಮ ಅಭ್ಯರ್ಥಿಗಳ ಪರ ಸಾಕಷ್ಟು ಪ್ರಚಾರ ನಡೆಸಿದ್ದರು. ಆದರೂ ಕಾಂಗ್ರೆಸ್ ಕೇವಲ 1 ಸೀಟು ಗೆಲ್ಲುವುದರಲ್ಲಿ ಯಶಸ್ವಿಯಾಗಿತ್ತು. ಈ ನಿಟ್ಟಿನಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಹೆಚ್‍.ಕೆ.ಪಾಟೀಲ್‍ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನಿರ್ಧಾರ ಪ್ರಕಟಿಸಿದ ಹೆಚ್‍.ಕೆ ಪಾಟೀಲ್‍..!

ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಹೆಚ್‍.ಕೆ ಪಾಟೀಲ್‍ ‘ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ’ ನೀಡೋದಾಗಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos