ಕೇಂದ್ರ ಗೃಹ ಸಚಿವ ಭೇಟಿಯಾಗಲಿರುವ ಸಿಎಂ.

ಕೇಂದ್ರ ಗೃಹ ಸಚಿವ ಭೇಟಿಯಾಗಲಿರುವ ಸಿಎಂ.

ನವದೆಹಲಿ: ಇಂದು ಅಮಿತ್ ಶಾ ರನ್ನು ಭೇಟಿಯಾಗಲಿರುವ  ಸಿ ಎಂ ಸಿದ್ದರಾಮಯ್ಯ . ಸಿ ಎಂ ಸಿದ್ದರಾಮಯ್ಯ ಇಂದು ಗೃಹ ಸಚಿವ ಅಮಿತ್ ಶಾ ರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅಮಿತ್ ಶಾ ಭೇಟಿಗೆ  ಕಾಲವಕಾಶ ಕೇಳಿರುವರು. ಸಿಎಂ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆಗೆ ಆಗ್ರಹಿಸುವ ಸಲುವಾಗಿ ಕಾಲಾವಕಾಶವನ್ನು ಕೇಳಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos