ಕೊರೊನ ಭೀತಿ: ಪ್ಯಾಕೆಟ್ ರೂಪದಲ್ಲಿ ಇಂದಿರಾ ಕ್ಯಾಂಟೀನ್ ಊಟ

ಕೊರೊನ ಭೀತಿ: ಪ್ಯಾಕೆಟ್ ರೂಪದಲ್ಲಿ ಇಂದಿರಾ ಕ್ಯಾಂಟೀನ್ ಊಟ

ಬೆಂಗಳೂರು, ಮಾ. 27: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡಜನರು ಆಹಾರಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ ಹೀಗಿರುವಾಗ ರಾಜ್ಯ ಸರ್ಕಾರ ಬಡವರಿಗೆಂದೇ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ತೆರೆಯಲು ಮುಂದಾಗಿದೆ. ಹೌದು, ಇಂದಿರಾ ಕ್ಯಾಂಟೀನ್ ಊಟವನ್ನು ಪ್ಯಾಕೆಟ್ ರೂಪದಲ್ಲಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕೊರೊನಾ ವೈರಸ್ ನಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಬಡ ಜನರಿಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್ ನಲ್ಲಿ ಪ್ಯಾಕೇಟ್ ರೂಪದಲ್ಲಿ ಆಹಾರ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಪುರಸಭೆ ವ್ಯಾಪ್ತಿಯಲ್ಲಿ ಮನೆಮನೆಗೆ ದಿನಸಿ ಕೊಡಲು ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos