ಬೆಂಗಳೂರು, ಜೂ. 24: ಕನ್ನಡ ಚಿತ್ರರಂಗದ ಖಾತ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನ ಇಂದು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತ ಸಂಭವಿಸಿದ್ದು ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಖ್ಯಮಂತ್ರಿ ಚಂದ್ರು ಅವರಿಗೆ ಕಳೆದ ಹಲವು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈ ಮೊದಲು 2 ಬಾರಿ ಲಘು ಹೃದಯಾಘಾತ ಸಂಭವಿಸಿತ್ತು. ಇಂದು ಕೂಡ ಅದು ಮರುಕಳಿಸಿದೆ. ಹೀಗಾಗಿ ಬೆಳಿಗ್ಗೆ 10.30ಕ್ಕೆ ಅವರನ್ನು ಜೆಪಿ ನಗರದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗಾಗಲೇ ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದದ್ದು, ಅವರ ಆರೋಗ್ಯದ ಸ್ಥಿತಿ ನೋಡಿ ವೈದ್ಯರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಇಂದು ಹಾರ್ಟ್ ಸರ್ಜರಿ ನಡೆಯುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.