ಮಂಡ್ಯ: ಕೊರೋನಾದಿಂದಾಗಿ ಜಿಲ್ಲೆಯ ಮದ್ದೂರು, ಶ್ರೀರಂಗಪಟ್ಟಣ ಆಸ್ಪತ್ರೆ, ಅರೆಕೆರೆ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸೀಲ್ಡೌನ್ ಮಾಡಲಾಗಿದೆ.
ಮದ್ದೂರು ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ, ತಾಲ್ಲೂಕು ಆರೋಗ್ಯಾಧಿಕಾರಿ ವಾಹನ ಚಾಲಕ, ಶ್ರೀರಂಗಪಟ್ಟಣ ತಾಲ್ಲೂಕು ಆಸ್ಪತ್ರೆ ಕಚೇರಿಯ ಓರ್ವ ಮಹಿಳಾ ಸಿಬ್ಬಂದಿ ಹಾಗೂ ನಾನ್ ಕ್ಲಿನಿಕಲ್ ಮಹಿಳೆಗೆ ಸೋಂಕು ದೃಢಪಟ್ಟಿದೆ. ಅರೆಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಂಕಿತ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂರು ಆಸ್ಪತ್ರೆಗಳನ್ನು ಸಾನಿಟೈಜ್ ಮಾಡಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರಲ್ಲಿ ಆತಂಕ ಮನೆ ಮಾಡಿದೆ.