ಬೆಳಗಾವಿ, ಅ.26 : ನಗರದ ಸರಕಾರಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಸತಿ ನಿಲಯಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿದ್ದು, ವಸತಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ವೇಳೆ ವಸತಿ ನಿಲಯದ ಅಡುಗೆ ಕೋಣೆಗೆ ತೆರಳಿದ ರಾಜ್ಯದ ಉಪ ಮುಖ್ಯಮಂತ್ರಿ ಅಡುಗೆಯ ರುಚಿ ನೋಡಿದರು.
ಬೆಳಗಾವಿಯ ಸಂಗಮೇಶ್ವರ ನಗರದಲ್ಲಿ ಇರುವ ಸರಕಾರಿ ಮೆಟ್ರಿಕ್ ನಂತರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಾಲಕರ ವಸತಿ ನಿಲಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ವಸತಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.