ಬಾಗಲಕೋಟೆ,ನ. 27 : ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಕವಿತಾ ಬ್ಯಾಡಗಿ(24) ಅನುಮಾನಾಸ್ಪದ ಮೃತಪಟ್ಟ ಗೃಹಿಣಿ. ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಮೃತ ಕವಿತಾಳ ಪೋಷಕರು ಇದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆ ಅಪ್ಜಲ್ಪುರ ತಾಲೂಕಿನ ಚಿಕ್ಕಸಂಗಿ ಗ್ರಾಮದ ನಿವಾಸಿಯಾಗಿರುವ ಕವಿತಾ ಆರು ವರ್ಷದ ಹಿಂದೆ ಕಾಡಪ್ಪ ಎಂಬಾತನನ್ನು ಮದುವೆ ಮಾಡಿಕೊಂಡರು. ಪದೇ ಪದೇ ವರದಕ್ಷಿಣೆ ತರುವಂತೆ ಕಾಡಪ್ಪ, ಕವಿತಾಳ ಮೇಲೆ ಹಲ್ಲೆ ಮಾಡುತ್ತಿದ್ದರು. ಈಗ ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.