ಹುಬ್ಬಳ್ಳಿ, ಜ. 25: ಸಿಎಎ, ಎನ್.ಆರ್ ಸಿ ಕಾಯಿದೆ ವಿರೋಧಿಸಿ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ವತಿಯಿಂದ ಶಾಸಕ ಪ್ರಸಾದ ಅಬ್ಬಯ್ಯ ಅವರ ನೇತೃತ್ವದಲ್ಲಿ ಜ.28 ರಂದು ಹಮ್ಮಿಕೊಂಡಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪೌರತ್ವ ಕಾಯಿದೆ ವಿರೋಧಿಸಿ ಅಲ್ಪಸಂಖ್ಯಾತ ಸಮುದಾಯ, ಪ್ರಗತಿಪರ ವೇದಿಕೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿದ್ದೆ, ಎಲ್ಲ ದಲಿತ ಸಂಘ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 11 ಕ್ಕೆ ನಗರದ ಪ್ರಧಾನ ಅಂಚೆ ಕಚೇರಿ ಎದುರಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಲ್ಯಾಮಿಂಗ್ಟನ್ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತ ಮಾರ್ಗವಾಗಿ ಚೆನ್ನಮ್ಮ ವೃತ್ತದ ಮೂಲಕ ತಹಶಿಲ್ದಾರರ ಕಚೇರಿ ತಲುಪಿ ನಂತರ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ನಂತರ ಅಂಜುಮನ ಸಂಸ್ಥೆಯ ಧರಣಿ ಧಾರವಾಡ ಬೆಂಬಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಾಮಂಡಳದ ಪಿತಾಂಬ್ರಪ್ಪ ಬಿಳಾರ, ಮಾರುತಿ ದೊಡ್ಡಮನಿ, ಉಳ್ಳಿಕಾಶಿ, ಗಣೇಶ ಟಗರಗುಂಟಿ, ಗಣೇಶ ದೊಡ್ಡಮನಿ, ಪ್ರಭು ಪ್ರಭಾಕರ ಸೇರಿದಂತೆ ಮುಂತಾದವರು ಇದ್ದರು.