ಹೈದರಾಬಾದ್ ಕರ್ನಾಟಕ ‘ಕಲ್ಯಾಣ ಕರ್ನಾಟಕ’

ಹೈದರಾಬಾದ್ ಕರ್ನಾಟಕ ‘ಕಲ್ಯಾಣ ಕರ್ನಾಟಕ’

ಬೆಂಗಳೂರು, ಸೆ. 7: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ವೆಂದು ಮರು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಶುಕ್ರವಾರ ನಡೆದ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಂಪುಟ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಪುನಾರಚಿಸಿ ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ ಎಂದು ಹೆಸರಿಸಲಾಗುತ್ತದೆ. ಇದರೊಂದಿಗೆ ಆ ಭಾಗದ ಜನರ ಬಹು ವರ್ಷಗಳ ಹಕ್ಕೊತ್ತಾಯಕ್ಕೆ ಮಾನ್ಯತೆ ದೊರಕಿದಂತಾಗಿದೆ.
ಈ ಭಾಗದ ಅಭಿವೃದ್ಧಿ ಮತ್ತು ಕಲ್ಯಾಣ ವನ್ನು ಗಮನದಲ್ಲಿರಿಸಿಕೊಂಡು ಈ ಹೆಸರು ನೀಡಲಾಗಿದೆ ಎಂದು ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos