ಸೋತಿದ್ದೇನೆ,ನಾನು ಸತ್ತಿಲ್ಲ : ಹೆಚ್. ವಿಶ್ವನಾಥ್

ಸೋತಿದ್ದೇನೆ,ನಾನು ಸತ್ತಿಲ್ಲ : ಹೆಚ್. ವಿಶ್ವನಾಥ್

ಮೈಸೂರು, ಡಿ. 18 : ನಾನು ಸೋತಿದ್ದೇನೆ, ಹಾಗಂತ ನಾನು ಸತ್ತಿಲ್ಲ ಎಂದು ಮಾಜಿ ಶಾಸಕ ಹಾಗೂ ಉಪಚುನಾವಣೆ ಪರಾಜಿತ ಅಭ್ಯರ್ಥಿ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ, ಸಾರ್ವಜನಿಕವಾಗಿ, ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ. ಕೆಲವರು ತಾವು ಬಾರಿ ಸತ್ಯವಂತರು ಅನ್ನೋ ರೀತಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ನಾನು ಹಣ ತಿಂದೆ ಅಂತಾ ಅಪಪ್ರಚಾರ ಮಾಡಿದರು. ಆದರೆ, ನಾನು ಯಾರ ಹಣ ತಿಂದವನಲ್ಲ ಬೇರೆಯವರಿಗೆ ತಿನ್ನಿಸಿದವನು.
ನಾನು ಯಾರ ಅನ್ನಕ್ಕೂ ಕೈ ಹಾಕಿಲ್ಲ. ನಾನೇ ಲಕ್ಷಾಂತರ ಮಕ್ಕಳಿಗೆ ಅನ್ನ ಕೊಡುವ ಯೋಜನೆ ಮಾಡಿದ್ದೇನೆ. ನನಗೆ ದೊಡ್ಡ ದೂರದರ್ಶಿತ್ವ ಇದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos